Wednesday, June 3, 2015

ಖುಷಿ ನೀಡಿದ ತಾಳಮದ್ದಳೆ


              ಮೇ 27ರಂದು ಅಪರಾಹ್ನ ಗಂಟೆ 3. ಪುತ್ತೂರು ಹಾರಾಡಿ ಶ್ಯಾಮ ಭಟ್ಟರ ಗೃಹಪ್ರವೇಶ. ಬಡೆಕ್ಕಿಲ ಗಣರಾಜ ಇವರ ಆಯೋಜನೆಯಲ್ಲಿ ತಾಳಮದ್ದಳೆ. ಪ್ರಸಂಗ : ದಕ್ಷಾಧ್ವರ. ಸುಮಾರು 3 ಗಂಟೆಯಿಂದ 7-30ರ ತನಕ ತಾಳಮದ್ದಳೆಯ ವೈಭವ.
              ಪದ್ಯಾಣ ಗಣಪತಿ ಭಟ್ ಮತ್ತು ತೆಂಕಬೈಲು ತಿರುಮಲೇಶ್ವರ ಭಟ್ಟರ ದ್ವಂದ್ವ ಹಾಡುಗಾರಿಕೆ ಕೂಟದ ಹೈಲೈಟ್. ಇಬ್ಬರೂ ಸುಶ್ರಾವ್ಯವಾಗಿ ಹಾಡಿ ಪ್ರಸಂಗವನ್ನು ಉತ್ತುಂಗ ಶಿಖರಕ್ಕೇರಿಸಿದ್ದರು. ಚೈತನ್ಯ ಪದ್ಯಾಣರ ಮದ್ದಳೆ. ರವಿ ಭಟ್ ಚೆಂಡೆ.
ಅರ್ಥಧಾರಿಗಳಾಗಿ - ಉಜಿರೆ ಅಶೋಕ ಭಟ್ (ಈಶ್ವರ), ನಾ. ಕಾರಂತ ಪೆರಾಜೆ (ದಾಕ್ಷಾಯಿಣಿ), ಪಕಳಕುಂಜ ಶ್ಯಾಮ ಭಟ್ (ದಕ್ಷ), ಭಾಸ್ಕರ ಬಾರ್ಯ (ದೇವೇಂದ್ರ), ಪೆರುವೋಡಿ ನಾರಾಯಣ ಭಟ್, ಜಯಾನಂದ ಕೊಡಂಗಾಯಿ (ಬ್ರಾಹ್ಮಣರು), ಬಡೆಕ್ಕಿಲ ಗಣರಾಜ ಭಟ್ (ವೀರಭದ್ರ).
            ತುಂಬಾ ತೃಪ್ತಿ ನೀಡಿದ ತಾಳಮದ್ದಳೆ. ಸುಮೂರು ನೂರಕ್ಕೂ ಮಿಕ್ಕಿ ಪ್ರೇಕ್ಷಕರು ಕೂಟವನ್ನು ಆಸ್ವಾದಿಸಿದ್ದರು. ಅಶೋಕ ಭಟ್ಟರ ಮಾತಿನ ವೈಖರಿ. ಎದುರು ಪಾತ್ರವನ್ನು ಮಾತಿಗೆಳೆಯುವ ತಂತ್ರ ಅನನ್ಯ. ಅವರೊಂದಿಗೆ ಮೊದಲು ಪಾತ್ರಗಳನ್ನು ಮಾಡಿದ ಅನುಭವವಿದ್ದುರಿಂದ ಕೂಟದ ಅರ್ಥಗಾರಿಕೆ ಕಷ್ಟವಗಿಲ್ಲ. ಲೌಕಿಕ, ತಿಳಿ ಹಾಸ್ಯದೊಂದಿಗೆ ಪ್ರಸಂಗ ಚೆನ್ನಾಗಿ ಮೂಡಿಬಂತು.
        


No comments:

Post a Comment